ಬಿಂದುವಿನಿಂದ ಅನಂತದೆಡೆಗೆ...

"ಸರಸವೇ ಜೀವನ, ವಿರಸವೆ ಮರಣ "

Thursday, March 31, 2016

ವಿನಮ್ರ ಮನವಿ

ಸಾಹಿತ್ಯ  ಪ್ರಿಯರೇ , ಸಹೃದಯ ಗೆಳೆಯರೇ , ನಿಮ್ಮೆಲ್ಲರಿಗೂ ನಿಮ್ಮ ಪ್ರೀತಿಯ ಗೆಳೆಯ ಲಿಂಗೇಶ್ ಹುಣಸೂರು  ಮಾಡುವ ನಮಸ್ಕಾರಗಳು ಹಾಗು ವಿನಮ್ರ ಮನವಿ .

* ನನ್ನ  ಬದುಕಿನ  ಈವರೆವಿಗಿನ ಅನುಭವಗಳು , ಕನಸುಗಳು ,ನೆನಪುಗಳು  ಎಲ್ಲವನ್ನು ಒಟ್ಟುಗೂಡಿಸಿ "ಬಿಂದುವಿನಿಂದ ಅನಂತದೆಡೆಗೆ " ಕವನ ಸಂಕಲ ರೂಪುಗೊಂಡಿದೆ .

* ನಿಮ್ಮಿಂದ ಹೊರತಾದ ನೆನಪುಗಳು , ಕನಸುಗಳು , ಕಲ್ಪನೆಗಳು  ನನ್ನ ಬದುಕಿನಲ್ಲಿ ಯಾವುದೂ  ಇಲ್ಲ . ಹಾಗಾಗೆ ನನ್ನೆಲ್ಲಾ ಗೆಳೆಯರ ಅಧಮ್ಯ ಪ್ರೀತಿಗೆ ಕೃತಿಯನ್ನು  ಸಮರ್ಪಿಸಿದ್ದೇನೆ .

* ಇಲ್ಲಿ ಬಿಟ್ಟು ಹೋದವರ ಬಗೆಗೆ ಕಾಡುವ ನೆನಪುಗಳಿವೆ., ಉಳಿದು ಕೊಂಡವರ ಬಗೆಗೆ ಪ್ರೀತಿ ಇದೆ , ಗೆಳೆಯರ ಬಗೆಗೆ ಕಾಳಜಿ ಇದೆ , ಸಮಾಜದ ಬಗೆಗೆ ಕಳಕಳಿ ಇದೆ , ಪ್ರೀತಿಯ ಪಿಸುಮಾತುಗಳಿವೆ , ಬದುಕಿಗೆ ಸ್ಪೂರ್ತಿಯ ಸಾಲುಗಳಿವೆ , ಸುಂದರ ಕಲ್ಪನೆಗಳಿವೆ , ಕನಸುಗಳ ಚಿತ್ತಾರವಿದೆ ... ಒಟ್ಟಿನಲ್ಲಿ ನೀವು ನಿಮ್ಮನ್ನೊಮ್ಮೆ ಕವಿತೆಗಳ ಕನ್ನಡಿಯಲ್ಲಿ ಅನಾರಣ ಮಾಡಿಕೊಳ್ಳಬಹುದು .

*ನಾಡಿನ ಖ್ಯಾತ ವಿಮರ್ಶಕರಾದ ಡಾ//ಬೈರಮಂಗಲ ರಾಮೇಗೌಡ ಅವರು ಮುನ್ನುಡಿ ಬರೆದಿದ್ದಾರೆ , ಖ್ಯಾತ ಸಾಹಿತಿ ಶ್ರೀ ದ್ವಾರನಕುಂಟೆ  ಪಾತಣ್ಣ ಅವರು ಬೆನ್ನುಡಿ ಬರೆದಿದ್ದಾರೆ .

* ಇವೆಲ್ಲದಕ್ಕೂ ಒಂದು ಬೆಲೆ ಇದೆ  ಅದು ನಿಮ್ಮ ಪ್ರೀತಿ. ನಿಮ್ಮಗಳ ಪ್ರೀತಿಗೆ , ಅಭಿಮಾನಕ್ಕೆ ಬೆಲೆ ಕಟ್ಟಲು ಸಾಧ್ಯವೇ ?!ಆದರೂ  ನಮ್ಮ ಮುಂದಿನ ಸಮಾಜಮುಖಿ ಕನಸುಗಳ ಸಾಕಾರಕ್ಕೆ ೧೦೦ ರೂ  ಎಂದು ನಿಗಧಿ ಮಾಡಿದ್ದೇವೆ .


* ಕೃತಿಯಿಂದ ಬರುವ ಹಣದಲ್ಲಿ " ನಾವು ಮತ್ತು ನಮ್ಮೂರು " ಎಂಬ ಪುಸ್ತಕ ಸರಣಿಯನ್ನು ಗೆಳೆಯರೆಲ್ಲಾ ಕೂಡಿ ಪ್ರಾರಂಭಿಸುತ್ತಿದ್ದೇವೆ. ಪುಸ್ತಕಗಳನ್ನು ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಉಚಿತವಾಗಿ ನೀಡಲಾಗುವುದು .

* ರಾಜ್ಯದ ಅಂಧ ವಿಧ್ಯಾರ್ಥಿಗಳ ಸಾಹಿತ್ಯಿಕ ಆಸಕ್ತಿಯನ್ನು ಉತ್ತೇಜಿಸಲು ಕವನ ಸಂಕಲನದ  ಮತ್ತು  ಪ್ರಕಟಗೊಳ್ಳುವ ಉಚಿತ ಪುಸ್ತಕ ಧ್ವನಿ ಪಟ್ಯ   ಮಾಡಿ ಉಚಿತವಾಗಿ ಅಂಧ ಮಕ್ಕಳ ಶಾಲೆಗಳಿಗೆ ಒದಗಿಸಿ , ಸಂವಾದ ಕ್ಕೆ ಅವಕಾಶ ಕಲ್ಪಿಸುವುದು .



* ಮೊದಲಿಗೆ ಕರ್ನಾಟಕ ನಾಡು ನುಡಿ  ಬಗೆಗೆ ಪ್ರತಿಯೊಬ್ಬರೂ ತಿಳಿಯಲೇ ಬೇಕಾದ ೧೦೦೦ ಮಾಹಿತಿಗಳನ್ನು ಒಳಗೊಂಡ ಪುಸ್ತಕ ಪ್ರಕಟಣೆ .

*ಅತಿ ಹೆಚ್ಚು ಪುಸ್ತಕ ಕೊಂಡು  ಜ್ಞಾನ ದಾಸೋಹ ಕನಸಿನಲ್ಲಿ ಪಾಲ್ಗೊಂಡು , ಅಂಧ ಮಕ್ಕಳ ಸಾಹಿತ್ಯ ಪ್ರೀತಿಗೆ ಉಚಿತ ದ್ವನಿ ಪಟ್ಯ  ಉಡುಗೊರೆ ಕೊಡುವ ಸಹೃದಯರ ಹೆಸರನ್ನು   , ಉಚಿತ ಪುಸ್ತಕ ಹಾಗು ಸಿಡಿ ಯಲ್ಲಿ ಮುದ್ರಿಸಿ , ಅವರ ಸೇವೆಯನ್ನು ನೆನೆಯಲಾಗುವುದು .

* ಪ್ರತಿ ವರ್ಷ ಒಂದು ಪುಸ್ತಕವನ್ನು ಯೋಜನೆ ಯಡಿಯಲಿ  ಪ್ರಕಟಿಸಲಾಗುವುದು 

* ಆತ್ಮಿಯರೇ ಹೆಚ್ಹು ಹೆಚ್ಚು ಪುಸ್ತಕ ಕೊಂಡುಕೊಳ್ಳಿ , ನಿಮ್ಮ ಗೆಳೆಯರಿಗೂ ತಿಳಿಸಿ , ಉಡುಗೊರೆ ನೀಡಿ , ಮೂಲಕ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ನಮ್ಮ ಕನ್ನಡ ಮಕ್ಕಳ ಜ್ಞಾನ ವೃದ್ದಿಸುವ  ನಮ್ಮ ಪುಟ್ಟ ಪ್ರಯತ್ನದಲ್ಲಿ , ನೀವೂ ಪಾಲ್ಗೊಳ್ಳಿ , ಮೂಲಕ ಕನ್ನಡ  ಕೆಲಸ, ಸಮಾಜ ಸೇವೆ ಯಲ್ಲಿ ನಿಮ್ಮದು ಹೆಜ್ಜೆ ಗುರುತಿರಲಿ .

* ನಮ್ಮ ಕನಸುಗಳ ಬಗೆಗೆ ನಿಮ್ಮ ಅಭಿಪ್ರಾಯ , ಸಲಹೆ ಗಳನ್ನು ತಪ್ಪದೇ ತಿಳಿಸಿ .

ಚುಕ್ಕಿ ಗೆಳೆಯರ ಬಳಗದ ಪರವಾಗಿ ,

ನಿಮ್ಮವ
ಲಿಂಗೇಶ್ ಹುಣಸೂರ್
ಮಿಂಚೆ :lingeshkc9@gmail.com
ವೆಬ್ :http://lingeshhunsur.blogspot.in
ನಿಸ್ತಂತು ದೂ :9964438393

ಅಂಚೆ ವಿಳಾಸ : ಲಿಂಗೇಶ್ ಹುಣಸೂರು ,
ಅಂಚೆ ಸಹಾಯಕ , ಎಸ ವಿ ವಿ ಏನ್ ಭವನ ,
ಎಸ .ಬಿ ಎಂ ಪ್ರಧಾನ ಕಚೇರಿ ಎದುರು ,
ಬೆಂಗಳೂರು -೫೬೦೦೦೯

ಅಂಚೆ ಮೂಲಕ ಪ್ರತಿಗೆ ೧೨೦ ರು ಗಳನ್ನೂ -ಎಂ ಮಾಡಿ ಮಾಹಿತಿ ನೀಡಿ .

ಧನ್ಯವಾದಗಳು

No comments: